ಬಡಗನ್ನೂರು: ಪುತ್ತೂರು ದ್ವಾರಕಾ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪೋಷಕರ ಸಭೆಯು ಅ.16ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಇವರು ವಹಿಸಿ ಸುಸಂಸ್ಕೃತ ಸಮಾಜಕ್ಕೆ ತಮ್ಮ ಮಕ್ಕಳನ್ನು ರೂಪಿಸುವುದರಲ್ಲಿ ಪೋಷಕರ ಪಾತ್ರ ಮತ್ತು ನಮ್ಮ ಜೀವನ ಶೈಲಿಯನ್ನು ಹೇಗೆ ಬದಲಾಯಿಸಿಕೊಳ್ಳಬೇಕೇಂದು ತಿಳಿಸಿದರು. ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ವಿಘ್ನೇಶ್ ಹಿರಣ್ಯರವರು ಪೋಷಕರ ಸಭೆಯ ಮಹತ್ವವನ್ನು ಸಭೆಗೆ ತಿಳಿಯಪಡಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಪ್ರೌಢಶಾಲೆಯ SDMC ಅಧ್ಯಕ್ಷರಾದ ಲಿಂಗಪ್ಪ ಗೌಡ ಮೂಡಿಕೆ ಉಪಸ್ಥಿತರಿದ್ದು, ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಮಾತಾಜಿ ಸುಮನಾ ಬಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ನೆರೆದಿರುವ ಪೋಷಕರ ಪರವಾಗಿ ಯಮುನಾ ಕೆ, ಯಶೋದಾ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಪ್ರಾಥಮಿಕ ವಿಭಾಗದ ಮುಖ್ಯ ಗುರುಗಳಾದ ರಾಜಗೋಪಾಲ ಯನ್ ವಂದಿಸಿದರು. ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕರಾದ ವಿಶ್ವನಾಥ್ ಬಿ ರವರು ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ವಿಭಾಗದ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.