ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಅಪರಾಹ್ನ ೨.೩೦ಕ್ಕೆ ಕರ್ನಾಟಕ ಗಮಕ ಕಲಾ ಪರಿಷತ್ತು, ಪುತ್ತೂರು ತಾಲೂಕು ಘಟಕದಿಂದ ದ.ಕ ಜಿಲ್ಲಾ ೧೦ನೇಯ ಗಮಕ ಸಮ್ಮೇಳನದ ಉದ್ಘಾಟನೆ, ಸಂಜೆ ೪ರಿಂದ ನವರಸ ಗಮಕ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಬೆಳಿಗ್ಗೆ ೧೦ರಿಂದ ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ನಿಂದ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
ಪುತ್ತೂರು ಪಶು ಆಸ್ಪತ್ರೆಯಲ್ಲಿ ವಿಶ್ವ ರೇಬೀಸ್ ದಿನಾಚರಣೆಯ ಅಂಗವಾಗಿ ಸಾಕುನಾಯಿಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ, ಮಾಹಿತಿ ಶಿಬಿರ
ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ, ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಸಂಕ್ರಮಣ ಅಗೇಲು ಸೇವೆ
ಆಲಂಕಾರು ಕೆದಿಲ, ಬುಡೇರಿಯಾ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಬೆಳಿಗ್ಗೆ ೧೦ರಿಂದ ಪುದ್ವಾರ್ ಮೆಚ್ಚಿ
ಕೆದಂಬಾಡಿ ಗ್ರಾಮ ದೈವ ಶ್ರೀ ಕೆದಂಬಾಡಿ ದೈವಸ್ಥಾನ ಮಂಜಕೊಟ್ಯ ಇದ್ಪಾಡಿಯಲ್ಲಿ ಮಧ್ಯಾಹ್ನ ೧೨.೨೫ಕ್ಕೆ ತಂಬಿಲ ಸೇವೆ, ಅನ್ನಸಂತರ್ಪಣೆ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬೆಳಿಗ್ಗೆ ೧೦ರಿಂದ ನಾಗತಂಬಿಲ, ಸಾಮೂಹಿಕ ಶ್ರೀ ಆಶ್ಲೇಷ ಬಲಿಪೂಜೆ, ಶ್ರೀ ಗಾಯತ್ರಿ ಹವನ, ಮಧ್ಯಾಹ್ನ ೧೨.೩೦ರಿಂದ ಮಹಾಪೂಜೆ
ಪಡುಮಲೆ ಬದಿನಾರು ಶ್ರೀ ಪೂಮಾಣಿ ಕಿನ್ನಿಮಾಣಿ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಪುದ್ವಾರ್ ಮೆಚ್ಚಿ, ನೇಮೋತ್ಸವ