ರಾಮಕುಂಜ: ಕ್ರೀಡಾ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಮಂಗಳೂರು ಇವರ ಆಶ್ರಯದಲ್ಲಿ ನಡೆದ 17ರ ವಯೋಮಾನದ ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಜೀವನ್ ಕೋಡಿಬೈಲ್ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈತ ಕಡಬ ಕೋಡಿಬೈಲ್ ನಿವಾಸಿ ಶಿವರಾಜ್ ಹಾಗೂ ಸ್ಮಿತಾ ದಂಪತಿಯ ಪುತ್ರ. ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ, ದಿವ್ಯಾ ಪಿ.ಎನ್., ರಾಘವ, ಕಿಶನ್ ತರಬೇತಿ ನೀಡಿದ್ದರು. ಸಂಸ್ಥೆಯ ಆಡಳಿತಾಧಿಕಾರಿ, ವ್ಯವಸ್ಥಾಪಕರು, ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿಯರು, ಶಿಕ್ಷಕ ಶಿಕ್ಷಕೇತರ ವೃಂದದವರು ಶುಭ ಹಾರೈಸಿದ್ದಾರೆ.