ಪುತ್ತೂರು: ಮಂಗಳೂರು ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅ.19ರಂದು ಆಯೋಜಿತವಾದ 22ನೇ ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಶೆಟ್ಟಿಮೆಜಲು ದಿನೇಶ್ ಆಚಾರ್ಯ ಇವರು 40ರ ವಯೋಮಾನದ 800 ಮೀ ಓಟ ಮತ್ತು 5 ಕಿ.ಮೀ ವೇಗದ ನಡಿಗೆಯಲ್ಲಿ ಚಿನ್ನದ ಪದಕ ಹಾಗೂ 200 ಮೀ ಓಟದಲ್ಲಿ ಕಂಚಿನ ಪದಕ ಗಳಿಸಿ ಡಿಸೆಂಬರ್ ನಲ್ಲಿ ಕೋಲಾರದಲ್ಲಿ ನಡೆಯುವ ರಾಜ್ಯ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಇವರು ಪುತ್ತೂರಿನ ಪ್ರಗತಿ ಆಸ್ಪತ್ರೆಯ ಅಕೌಂಟಿಂಗ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಥ್ಲೆಟಿಕ್ಸ್ ಮಾತ್ರವಲ್ಲದೇ ಈಗಾಗಲೇ ಹಲವಾರು ಕಡೆಗಳಲ್ಲಿ ಮ್ಯಾರಥಾನ್ ಸ್ಪರ್ಧೆಯಲ್ಲಿಯೂ ಭಾಗವಹಿಸಿರುತ್ತಾರೆ. ಮೇಜರ್ ವೆಂಕಟ್ ರಾಮಯ್ಯ, ಅಥ್ಲೆಟಿಕ್ ಕ್ಲಬ್ ಕೊಂಬೆಟ್ಟು ಹಾಗೂ ಶ್ರೀ ನಿಧಿ ಆರ್ಯಾಪು ಇವರಿಗೆ ತರಬೇತಿ ನೀಡಿರುತ್ತಾರೆ .