ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ಬಲೀಂದ್ರ ಪೂಜೆ ಮತ್ತು ಗೋಪೂಜೆ ಅ.21ರಂದು ನಡೆಯಿತು. ದೇವಸ್ಥಾನದ ಅರ್ಚಕ ವೆಂಕಟಕೃಷ್ಣ ಭಟ್ ಅವರು ವಿವಿಧ ವೈಧಿಕ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ಧರ್ಮಪಾಲ ಗೌಡ ಕರಂದ್ಲಾಜೆ, ಆಡಳಿತ ಸಮಿತಿ ಮಾಜಿ ಅಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ, ಆಡಳಿತ ಪಂಗಡದ ಅಧ್ಯಕ್ಷ ಸುಂದರ ಗೌಡ ಕೀಲೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿನೇಶ್ ಗೌಡ ಇಡ್ಯಡ್ಕ, ಪುಷ್ಪರಾಜ್ ಕಲಾಯಿ, ಪದ್ಮನಾಭ ಪೊನ್ನೆತ್ತಡಿ ಹಾಗೂ ಭಕ್ತರು ಉಪಸ್ಥಿತರಿದ್ದರು.
