ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಪೂಜೆ ,ಅನ್ನಸಂತರ್ಪಣೆ

0

ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.27ರಂದು ಷಷ್ಠಿ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ,ರಾತ್ರಿ ರಂಗಪೂಜೆ ನಡೆಯಿತು.

ದೇವಸ್ಥಾನದ ಅರ್ಚಕ ಪ್ರವೀಣ್ ಶಂಕರ್ ಅವರು ಪೂಜಾ ಕೈಂಕರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು,ಮೊಕ್ತೇಸರರಾದ ಮೋಹನ್‌ದಾಸ ರೈ ನಳೀಲು, ಕಿಶೋರ್ ಕುಮಾರ್ ರೈ, ಸತೀಶ್ ರೈ ನಳೀಲು, ಪ್ರವೀಣ್ ಕುಮಾರ್ ರೈ ನಳೀಲು ,ಅರುಣ್ ಕುಮಾರ್ ರೈ , ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುರೇಶ್ಚಂದ್ರ ರೈ ಪಾಲ್ತಾಡಿ , ಸೇವಾಕರ್ತರಾದ ಸಂತೋಷ್ ಕುಮಾರ್ ರೈ ಇಳಂತಾಜೆ ,ವಿಲಾಸ್ ರೈ ಪಾಲ್ತಾಡು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ರೈ ನಡುಕೂಟೇಲು,ಕಾರ್ಯದರ್ಶಿ ಪ್ರವೀಣ್ ಕುಮಾರ್, ಜತೆ ಕಾರ್ಯದರ್ಶಿ ಕಿರಣ್ ಕೆ.,ಕೋಶಾಧಿಕಾರಿ ಸುಧಾಕರ ರೈ ಪಾಲ್ತಾಡಿ ಹೊಸಮನೆ ಹಾಗೂ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here