ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಗುದ್ದಲಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ 

0

ಬಡಗನ್ನೂರು : ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ. 26ರಂದು ನಡೆದ  ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯಲ್ಲಿ ನ. 23 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದುಬೈ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಉದ್ಯಮಿ ಎಸ್ ಆರ್ ಜಿತೇಂದ್ರ ಸುವರ್ಣ ರವರು ಬಿಡುಗಡೆಗೊಳಿಸಿ ಮಾತನಾಡಿ ಶುಭ ಹಾರೖೆಸಿದರು.

ಕಾರ್ಯಕ್ರಮವು ಸಂಘದ ಅಧ್ಯಕ್ಷ ದೀಪಕ್ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. 

ಶ್ರೀ ಕ್ಷೇತ್ರ ಗೆಜ್ಜೆಗಿರಿ  ಕ್ಷೇತ್ರಾಡಳಿತ ಸಮಿತಿ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಮಾತನಾಡಿ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸದ ಉದ್ಘಾಟನೆಯ ಸಂದರ್ಭದಲ್ಲಿ ಹೆಚ್ಚಿನ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು.

ವೇದಿಕೆಯಲ್ಲಿ ಮಾಜಿ ಅಧ್ಯಕ್ಷರುಗಳಾದ ಸತೀಶ್ ಪೂಜಾರಿ, ಗೀತಾಂಜಲಿ,ಸುವರ್ಣ ಉಡುಪಿ, ಕೃತಿನ್ ಅಮೀನ್ ಮಂಗಳೂರು ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ದುಬೈ ಬಿಲ್ಲವ ಬಂಧುಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ  ಶೃತಿ ಹೆರಾಜೆ ತಂಡದವರಿಂದ ನೃತ್ಯ ಪ್ರದರ್ಶನ ನಡೆಯಿತು. ಪ್ರಜ್ಞ ಓಡಿಲ್ ನಾಳ ರವರು ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here