ಅಪಘಾತದ ಗಾಯಾಳುವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಗೆ ಅಡ್ಡಬಂದು ಹುಚ್ಚಾಟ ಮೆರೆದ ಸ್ಕೂಟಿ ಸವಾರ

0

ಪುತ್ತೂರು : ಬಿಸಿಲೆ ಟೆಂಪೋ ಅಪಘಾತ ಗಾಯಾಳುವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಗೆ ಸ್ಕೂಟಿ ಸವಾರನೊಬ್ಬ ಅಡ್ಡಬಂದು ಹುಚ್ಚಾಟ ಮೆರೆದ ಘಟನೆ ನಡೆದಿದೆ.

ಬಿಸಿಲೆ ಘಾಟ್ ನಲ್ಲಿ ನಡೆದ ಬಸ್ ಅಪಘಾತದಲ್ಲಿ ಸುಮಾರು 22 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು ಹಲವರನ್ನು ವಿವಿಧ ಆಸ್ಪತ್ರೆಗೆ ಸಾಗಿಸಲಾಗಿದೆ. ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದ ತೀವ್ರ ಗಾಯಗೊಂಡ ಮಹಿಳೆಯನ್ನು ಮಂಗಳೂರು ಆಸ್ಪತ್ರೆಗೆ ತುರ್ತು ಸಾಗಿಸುವ ಮದ್ಯೆ ಬಿ.ಸಿ ರೋಡ್ ಬಳಿ ಸ್ಕೂಟಿ ಸವಾರನೊಬ್ಬ ಆಂಬ್ಯುಲೆನ್ಸ್ ಗೆ ದಾರಿಮಾಡಿ ಕೊಡದೆ ಸುಮಾರು 4 ಕಿ. ಮೀ ಸತಾಯಿಸಿದ್ದಾನೆ ಎಂದು ವರದಿಯಾಗಿದೆ.

ಆಂಬ್ಯುಲೆನ್ಸ್ ಚಾಲಕ ಹಾರ್ನ್ ಹಾಕಿದರೂ, ಸೈರನ್ ಶಬ್ದವಿದ್ದರೂ ಸ್ಕೂಟಿ ಸವಾರ ದಾರಿ ಬಿಟ್ಟುಕೊಡಲಿಲ್ಲ,ಸ್ಕೂಟಿ ಸವಾರನ ಹುಚ್ಚಾಟವನ್ನು ಸಹಚಾಲಕ ಕಾರ್ತಿಕ್ ಎಂಬವರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದು ದೂರು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here