





ಆಲಂಕಾರು: ಶ್ರೀ ಭಾರತಿ ವಿದ್ಯಾಸಂಸ್ಥೆಗಳು ಆಲಂಕಾರು,ಗ್ರಾಮವಿಕಾಸ ಸಮಿತಿ ಆಲಂಕಾರು,ಸಪ್ತ ಶಕ್ತಿ ಸಂಗಮ ಆಲಂಕಾರು,ಲಯನ್ಸ್ ಕ್ಲಬ್ ದುರ್ಗಂಬಾ ಆಲಂಕಾರು,ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದಲ್ಲಿ ಆಲಂಕಾರು ಭಾರತಿ ವಿದ್ಯಾಸಂಸ್ಥೆ ಯ ಮಾಧವ ಸಭಾಭವನದಲ್ಲಿ ರಕ್ತದಾನ ಶಿಬಿರ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಈಶ್ವರ ಗೌಡ ಪಜ್ಜಡ್ಕ ವಹಿಸಿದ್ದರು. ಆಲಂಕಾರು ದುರ್ಗಾಂಬಾ ಲಯನ್ಸ್ ಕ್ಲಬ್ ನ ಅಧ್ಯಕ್ಷ ಪದ್ಮಪ್ಪ ಗೌಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶುಭಾಹಾರೈಸಿದರು.





. ರೋಟರಿ ಬ್ಲಡ್ ಬ್ಯಾಂಕ್ ನ ವೈದ್ಯಾಧಿಕಾರಿ ಡಾ.ರಾಧಾಕೃಷ್ಣ ರಾವ್ ರವರು ರಕ್ತ ದಾನದ ಮಹತ್ವ ಮತ್ತು ಪ್ರಯೋಜನದ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಶಾಲಾ ಕಾರ್ಯದರ್ಶಿ ಲ .ಇಂದುಶೇಖರ ಶೆಟ್ಟಿ, ಲಯನ್ಸ್ ಕ್ಲಬ್ ದುರ್ಗಾಂಬಾ ಇದರ ಕಾರ್ಯದರ್ಶಿ ಲ.ಲಿಂಗಪ್ಪ ಪೂಜಾರಿ ನೈಯಲ್ಗ ಉಪಸ್ಥಿತರಿದ್ದರು.ಶಾಲಾ ಆಡಳಿತ ಮಂಡಳಿ ಸದಸ್ಯೆ ಶ ಮಮತಾ ಅಂಬರಾಜೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಮುಖ್ಯಮಾತಾಜಿ ಆಶಾ ಎಸ್.ರೈ ವಂದಿಸಿದರು.
ವಿದ್ಯಾರ್ಥಿನಿಯರಾದ ರಕ್ಷಿತಾ,ಅಮೃತಾ,ದ್ವಿತಿ,ದ್ಯುತಿ ಎಚ್.ಕೆ,ರಶ್ಮಿಕಾ ಪ್ರಾರ್ಥಿಸಿದರು.ಶಿಕ್ಷಕ ಚಂದ್ರಹಾಸ್ ಕೆ.ಸಿ ಕುಂಟ್ಯಾನ ಕಾರ್ಯಕ್ರಮ ನಿರೂಪಿಸಿದರು.ಸಂಸ್ಥೆ ಎಲ್ಲಾ ಶಿಕ್ಷಕ ವೃಂದ..ಸಿಬ್ಬಂದಿ ವರ್ಗದವರು ಸಹಕರಿಸಿದರು.ಕಾರ್ಯಕ್ರಮದಲ್ಲಿ 43 ಮಂದಿ ರಕ್ತದಾನ ಮಾಡಿದರು.










