ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಳಸಿ ಪೂಜೆ

0

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.3ರಂದು ಬೆಳಿಗ್ಗೆ ತುಳಸಿ ಪೂಜೆ ನಡೆಯಿತು.


ಬೆಳಗ್ಗೆ ಶ್ರೀ ದೇವರ ಪೂಜೆ, ನಿತ್ಯ ಬಲಿ ಉತ್ಸವದ ಬಳಿಕ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ತುಳಸಿ ಪೂಜೆ ನೆರವೇರಿಸಿದರು.

ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ನಳಿನಿ ಪಿ ಶೆಟ್ಟಿ, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ದಿನೇಶ್ ಪಿ.ವಿ, ಕೃಷ್ಣವೇಣಿ, ಈಶ್ವರ ಬೆಡೇಕರ್, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸಹಿತ ಶಿಲಾಮಯ ತುಳಸಿ ಕಟ್ಟೆ ಸಮರ್ಪಣೆ ಮಾಡಿದ ಮುರಳಿಧರ ರೈ ಅವರ ಮನೆಯವರು, ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here