





4,5 ಹಾಗೂ 6 ರಂದು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳು
ವಿವೇಕಾನಂದ ಪದವಿಪೂರ್ವ ಕಾಲೇಜಿನ 60ನೇ ವರ್ಷಾಚರಣೆ
ಸಾಮಾಜಿಕ ಹಾಗೂ ಕಲಾ ಕ್ಷೇತ್ರದ ಹಲವು ಗಣ್ಯರು ಹಾಗೂ ವಾಗ್ಮಿಗಳು ಭಾಗಿ


ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು 60 ಸಂವತ್ಸರಗಳನ್ನು ಪೂರೈಸುತ್ತಿದ್ದು ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನವಂಬರ್ 4,5,6ನೇ ತಾರೀಕು ಮಂಗಳವಾರ, ಬುಧವಾರ ಮತ್ತು ಗುರುವಾರದಂದು ಪ್ರಸಕ್ತ ಶೈಕ್ಷಣಿಕ ವರ್ಷದ ಕಾಲೇಜು ವಾರ್ಷಿಕೋತ್ಸವವು ನಡೆಯಲಿದೆ.





ಸಾಧನಾ ದರ್ಪಣಂ
ನವಂಬರ್ 4ರ ಬೆಳಗ್ಗೆ 7.30ಕ್ಕೆ ಸರಿಯಾಗಿ ಕಶೆಕೋಡಿ ಸೂರ್ಯನಾರಾಯಣ ಭಟ್ ನೇತೃತ್ವದಲ್ಲಿ ಗಣಹೋಮ ನಡೆಯಲಿದ್ದು, ಮಧ್ಯಾಹ್ನ 1.30ಕ್ಕೆ ಸರಿಯಾಗಿ ವೀರರಾಣಿ ಅಬ್ಬಕ್ಕ ವೇದಿಕೆಯ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ಬಳಿಕ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ಕಾಲೇಜು ಕ್ರೀಡಾಕೂಟದ ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ವಿತರಿಸಿ ಗೌರವಿಸುವ ‘ಸಾಧನಾ ದರ್ಪಣಂ’ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ಡಾ. ಕೆ. ಎನ್. ಸುಬ್ರಹ್ಮಣ್ಯ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಪ್ರೊ. ವಿ. ಜಿ. ಭಟ್ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಲೆಕ್ಕ ಪರಿಶೋಧಕರಾದ ಸಿ.ಎ. ದೀಪ್ಷಿಕ್ ಕೆ. ಭಾಗಿಯಾಗಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾದ ಡಾ.ಮುರಳೀಕೃಷ್ಣ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಪರಂಪರಾ ದರ್ಶನಂ
ನವಂಬರ್ 5ನೇ ತಾರೀಕಿಗೆ ಪರಂಪರಾ ದರ್ಶನಂ ಎಂಬ ಶೀರ್ಷಿಕೆಯೊಂದಿಗೆ ಸಭಾ ಕಾರ್ಯಕ್ರಮವು ನಡೆಯಲಿದ್ದು, ಇದರ ಅಧ್ಯಕ್ಷತೆಯನ್ನು ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ. ಇವರು ವಹಿಸಿಕೊಳ್ಳಲಿದ್ದಾರೆ. ಮೂಡಬಿದಿರೆಯ ಖ್ಯಾತ ವಾಗ್ಮಿಗಳಾದ ಎನ್. ಆರ್ ದಾಮೋದರ ಶರ್ಮಾ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷ ಅಭ್ಯಾಗತರಾಗಿ ಸತೀಶ್ ರಾವ್ ಪಿ, ಉಪಾಧ್ಯಕ್ಷರು, ಆಡಳಿತಮಂಡಳಿ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಆಗಮಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ಕೋಶಾಧಿಕಾರಿಗಳಾದ ಸಚಿನ್ ಶೆಣೈ ಕೆ. ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಹರಿಣಾಕ್ಷಿ ಜೆ. ಶೆಟ್ಟಿ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ರಾ?, ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವು ಈ ದಿನ ನಡೆಯಲಿದೆ. ಸಭಾಕಾರ್ಯಕ್ರಮದ ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಷಷ್ಥ್ಯಬ್ಧ ಆಚರಣಂ
ನವಂಬರ್ 6ನೇ ತಾರೀಕಿನಂದು ಸಂಸ್ಥೆಯ 60ನೇ ವರ್ಷಾಚರಣೆಯನ್ನು ಆಚರಿಸುವ ಸಲುವಾಗಿ ಷಷ್ಥ್ಯಬ್ಧ ಆಚರಣಂ ಎಂಬ ಶೀರ್ಷಿಕೆಯೊಂದಿಗೆ ಕಾಲೇಜು ವಾರ್ಷಿಕೋತ್ಸವವು ನಡೆಯಲಿದೆ. ಮೂರನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ. ಇವರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳುನಾಡ ಮಾಣಿಕ್ಯ ಖ್ಯಾತಿಯ ಅರವಿಂದ ಬೋಳಾರ್, ತುಳು ಚಲನಚಿತ್ರ ನಟರು ಹಾಗೂ ಕಾರ್ಯಕ್ರಮದ ಪ್ರಧಾನ ವಕ್ತಾರರಾಗಿ ಸಂವಾದ ಚಾನಲ್, ಬೆಂಗಳೂರು ಇದರ ಸಂಪಾದಕರಾದ ವೃಷ್ಯಾಂಕ ಭಟ್ ನಿವಣೆ ಪಾಲ್ಗೊಳ್ಳಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ನಿರ್ದೇಶಕರಾದ ಇಂದಿರಾ ಬಿ. ಕೆ. ಈ ಸಂದರ್ಭದಲ್ಲಿ ಉಪಸ್ಥಿತರಿರುವರು. ಅರ್ಹ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ವಿತರಣೆ ಈ ದಿನ ನಡೆಯಲಿದೆ. ಸಭಾಕಾರ್ಯಕ್ರಮದ ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.










