ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಚಿಗುರುವುದು ಖಂಡಿತ: ಶಿರಂಕಲ್ಲು ಕೃಷ್ಣ ಭಟ್
ವಿಟ್ಲ: ಕರ್ನಾಟಕ ರಾಜ್ಯ ಬರಹಗಾರರ ವೇದಿಕೆ (ರಿ) ಹೂವಿನಹಡಗಲಿ ಜಿಲ್ಲಾ ಘಟಕ ದ.ಕ. ಕನ್ನಡ ಜಿಲ್ಲೆ, ತಾಲೂಕು ಘಟಕ ಬಂಟ್ವಾಳ – ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ) ಹುಬ್ಬಳ್ಳಿ – ತಾಲೂಕು ಸಮಿತಿ ಬಂಟ್ವಾಳ ಹಾಗೂ ಕರ್ನಾಟಕ ಪ್ರೌಢಶಾಲೆ ಮಾಣಿ ಇವುಗಳ ಸಹಭಾಗಿತ್ವದಲ್ಲಿ 70 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಾಹಿತ್ಯ ರಚನಾ ಕಮ್ಮಟ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು.
ನಿವೃತ್ತ ಸಂಸ್ಕೃತ ಶಿಕ್ಷಕರಾದ ಶಿರಂಕಲ್ಲು ಕೃಷ್ಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ‘ಸಾಹಿತ್ಯದ ಅಭಿರುಚಿ ಮನೆಯಿಂದ ಆರಂಭವಾಗಿ ಶಾಲೆಯಲ್ಲಿ ಉನ್ನತಿ ಹೊಂದಿ ಸಮಾಜದಲ್ಲಿ ಪ್ರಸ್ತುತಿಗೊಳ್ಳಬೇಕು. ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಚಿಗುರುವುದು ಖಂಡಿತ ಎಂದರು. ಕ.ಚು.ಸಾ.ಪ. ಮತ್ತು ಕ.ರಾ. ಬ. ಸಂ. ದ.ಕ. ಜಿಲ್ಲಾ ಘಟಕ ಅಧ್ಯಕ್ಷ ಜಯಾನಂದ ಪೆರಾಜೆ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಿಮಿಸಿದ್ದರು.ಇದೇ ಸಂದರ್ಭ ಕಳೆದ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಾಧಕಿ ಮರ್ಯಂ ಸ್ವಾಬಿರಾರನ್ನು ಗೌರವಿಸಲಾಯಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಕಿರಣ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಹಾಜಿ. ಕೆ. ಇಬ್ರಾಹಿಂ, ಮುಖ್ಯ ಶಿಕ್ಷಕರಾದ ಎಸ್. ಚೆನ್ನಪ್ಪ ಗೌಡ ಉಪಸ್ಥಿತರಿದ್ದರು.

ಬಳಿಕ ನಡೆದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಿ ಅಶೋಕ ಎನ್. ಕಡೇಶಿವಾಲಯ ವಹಿಸಿದ್ದರು. ವಿದ್ಯಾರ್ಥಿಯರಾದ ಶ್ರುತಿಜ, ರಕ್ಷಿತಾ, ನಮೃತ (ಕಿರಿಯ ವಿಭಾಗ) ಕ.ಚು.ಸಾ.ಪ. ರಾಜ್ಯ ಮಹಿಳಾ ಪ್ರತಿನಿಧಿ ಶಾಂತಾ ಪುತ್ತೂರು, ಕ.ಚು.ಸಾ. ಪ. ಬಂಟ್ವಾಳದ ಅಧ್ಯಕ್ಷ ರವೀಂದ್ರ ಕುಕ್ಕಾಜೆ, ಪುತ್ತೂರು ವಿವೇಕಾನಂದ ತಾಂತ್ರಿಕ ಕಾಲೇಜಿನ ಸಹ ಪ್ರಾಧ್ಯಾಪಕಿ ಮಾನಸ ಕೈಂತಜೆ , ಬಿ.ಎ. ವಿದ್ಯಾ ಸಂಸ್ಥೆ ತುಂಬೆಯ ಸಹ ಶಿಕ್ಷಕ ರಮೇಶ್ ನಾಯಕ್ ಮೆಲ್ಕಾರ್, ಪದ್ಮನಾಭ ಪೂಜಾರಿ ಬಂಟ್ವಾಳ, ಪ್ರವೀಣ್ ಜಯ ವಿಟ್ಲ ಮೊದಲಾದವರು ಕವನ ವಾಚಿಸಿದರು.
ಹಿಂದಿ ಶಿಕ್ಷಕರಾದ ಜಯರಾಮ ಕಾಂಚನ ಕಾರ್ಯಕ್ರಮ ಆಯೋಜಿಸಿ, ಕವನ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಮೈತ್ರಿ ಮತ್ತು ತಂಡ ಪ್ರಾರ್ಥಿಸಿ, ಜೀವಿತ್ ಮತ್ತು ತಂಡ ಸಹಕರಿಸಿದರು.