





ಉಪ್ಪಿನಂಗಡಿ: ಇಲ್ಲಿನ ಹೋಟೆಲೊಂದರ ಕಾರ್ಮಿಕ ಮೊದಲ ಮಹಡಿಯ ಕಾರಿಡಾರ್ನಿಂದ ಆಯತಪ್ಪಿ ಪಕ್ಕದಲ್ಲಿ ಹರಿಯುವ ತೋಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನ.4ರಂದು ನಸುಕಿನ ವೇಳೆ ಸಂಭವಿಸಿದೆ.


ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಬನಾರಿ ಮನೆ ನಿವಾಸಿ ಗಣೇಶ್ ನಾಯ್ಕ್ (60) ಎಂಬವರೇ ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಉಪ್ಪಿನಂಗಡಿಯ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಟೇಲೊಂದರಲ್ಲಿ ಕಾರ್ಮಿಕರಾಗಿದ್ದು, ನಸುಕಿನ ವೇಳೆ ಎದ್ದು ಕಾರಿಡಾರ್ ಬಳಿ ಬಂದಾಗ ಅಯತಪ್ಪಿ ಕೆಳಗಿನ ತೋಡಿಗೆ ಬಿದ್ದರು. ಈ ವೇಳೆ ತಲೆಗೆ ಗಂಭೀರ ಸ್ವರೂಪದ ಗಾಯವನ್ನು ಪಡೆದ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಮೃತರ ಮಗ ಜಗದೀಶ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.















