





ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ನ.6 ರಂದು ನೆರವೇರಲಿದೆ.


ಜಯಂತಿ ಭಾಸ್ಕರ್ ರವರು ಆರ್ಯಾಪು ಸಹಕಾರ ಸಂಘದಲ್ಲಿ ಸುದೀರ್ಘ 41 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಸೇವಾ ನಿವೃತ್ತಿ ಹೊಂದಿರುತ್ತಾರೆ. ಇವರ ಸೇವಾ ನಿವೃತ್ತಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗಿಗಳಾಗಬೇಕಾಗಿ ಸಹಕಾರಿ ಸಂಘದ ಅಧ್ಯಕ್ಷ ಎಚ್.ಮಹಮ್ಮದ್ ಆಲಿ, ಉಪಾಧ್ಯಕ್ಷ ಸುರೇಂದ್ರ ರೈ ಬಳ್ಳಮಜಲು, ನಿರ್ದೇಶಕ ಮಂಡಳಿ, ಸಿಬ್ಬಂದಿ ವರ್ಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















