ಪುತ್ತೂರು: ಕಬಕ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ಮಾದಕ ವಸ್ತು ಸೇವನೆ ಮಾಡಿದ ನಾಲ್ವರನ್ನು ಪುತ್ತೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳನ್ನು ಮುಬಾರಕ್ (21ವ), ಹಿತೇಶ್ (21ವ), ಅಬ್ದುಲ್ ಅನಾಸ್ (21ವ), ಉಮ್ಮರ್ ಫಾರೂಕ್ (41) ಎಂದು ಗುರುತಿಸಲಾಗಿದೆ.ನಗರ ಠಾಣೆ ಪಿಎಸ್ಐ ಆಂಜನೇಯ ರೆಡ್ಡಿ ಅವರು ನ.5ರಂದು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಈ ನಾಲ್ವರು ಮಾದಕ ವಸ್ತು ಸೇವಿಸಿದವರಂತೆ ಅನುಮಾನಾಸ್ಪದ ರೀತಿಯಲ್ಲಿ ಕಂಡು ಬಂದಿದ್ದರು. ಅವರನ್ನು ವಶಕ್ಕೆ ಪಡೆದುಕೊಂಡು ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಮುಂದೆ ಹಾಜರುಪಡಿಸಿ ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ, ಈ ನಾಲ್ವರು ಮಾದಕವಸ್ತು ಸೇವನೆ ಮಾಡಿರುವುದನ್ನು ವೈದ್ಯಾಧಿಕಾರಿ ದೃಢಪಡಿಸಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
