ರಾಜ್ಯ ಒಲಂಪಿಕ್ ಕಬಡ್ಡಿ ಪಂದ್ಯಾಟ : ಆಲಂಕಾರು ಶ್ರೀ ದುರ್ಗಾಂಬಾ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರದ್ದಾಗೆ ಬೆಳ್ಳಿ ಪದಕ

0

ಆಲಂಕಾರು: ಡಿಪಾರ್ಟೆಂಟ್ ಆಫ್ ಎಂಪವರ್ ಮೆಂಟ್ ಆಂಡ್ ಸ್ಪೋರ್ಟ್ಸ್ ಹಾಗೂ ಕರ್ನಾಟಕ ಒಲಂಪಿಕ್ ಅಸೋಶಿಯೇಷನ್‌ ಇವರ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ನ.03 ರಿಂದ ನ.07ರ ತನಕ ನಡೆದ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿದ ಆಲಂಕಾರು ಶ್ರೀ ದುರ್ಗಾಂಬಾ ಪ್ರೌಢ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯಾದ ಶ್ರದ್ದಾ ಕುಂಟ್ಯಾನ (ಕೆ.ಶೇಖರ ಗೌಡ ಮತ್ತು ಕೆ.ಯಶೋಧ ದಂಪತಿಗಳ ಪುತ್ರಿ) ಇವರು ಬೆಳ್ಳಿ ಪದಕವನ್ನು ಪಡೆದುಕೊಂಡಿರುತ್ತಾರೆ.

ಶ್ರದ್ದಾ ಕುಂಟ್ಯಾನ ಭಾಗವಹಿಸಿದ ದ.ಕ ತಂಡ ಫೈನಲ್ ಪಂದ್ಯಾಟದಲ್ಲಿ ಚಿಕ್ಕಮಗಳೂರು ವಿರುದ್ಧ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತದೆ. ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೇಯಸ್ಸು ರೈ ಅವರು ತರಬೇತಿ ನೀಡಿರುತ್ತಾರೆ. ಇವರ ಈ ಸಾಧನೆಗೆ ಆಡಳಿತ ಮಂಡಳಿಯ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಸದಸ್ಯರು, ಪ್ರಾಂಶುಪಾಲರು, ಮುಖ್ಯ ಗುರುಗಳು, ಎಲ್ಲಾ ಬೋಧಕ ಬೋಧಕೇತರ ವೃಂದದವರು, ರಕ್ಷಕ ಶಿಕ್ಷಕ ಸಂಘ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು‌ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here