ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಮಾಣಿ ವಲಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ, ಜನಜಾಗೃತಿ ವೇದಿಕೆ ಮಾಣಿ ವಲಯ, ಶ್ರೀ ಶಾರದಾಂಬ ಭಜನಾ ಮಂದಿರ ಅಶೋಕನಗರ ಅಳಕೆಮಜಲು ಇವರ ಸಹಭಾಗಿತ್ವದಲ್ಲಿ ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ. ಎಸ್. ಪ್ರಕಾಶ್ ಉರಿಮಜಲುರವರು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಪಶು ವೈದ್ಯಾಧಿಕಾರಿ, ಪೂಜಾ ಸಮಿತಿ ಅಧ್ಯಕ್ಷರೂ ಆದ ಮಂದಾರ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲದ ಯೋಜನಾಧಿಕಾರಿ ಸುರೇಶ್ ಗೌಡ, ಜನಜಾಗೃತಿ ವಲಯಾಧ್ಯಕ್ಷರಾದ ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು , ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದ ಅಧ್ಯಕ್ಷರಾದ ಕೃಷ್ಣ ಕಿಶೋರ್ ಭಟ್, ಜನಜಾಗೃತಿ ಸದಸ್ಯರಾದ ತನಿಯಪ್ಪ ಗೌಡ, ಮಾಣಿ ವಲಯದ ಒಕ್ಕೂಟಗಳ ವಲಯಾಧ್ಯಕ್ಷ ರಾದ ಸುಧಾಕರ ಸಪಲ್ಯ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಸುಗಂಧಿನಿ ಸ್ವಾಗತಿಸಿ, ಮೇಲ್ವಿಚಾರಕಿ ಆಶಾ ಪಾರ್ವತಿ ವರದಿ ವಾಚಿಸಿ,ವಂದಿಸಿದರು. ಶ್ರೀ ಶಾರದಾಂಬ ಭಜನಾ ಮಂದಿರದ ಸದಸ್ಯರಾದ ಉದಯಕುಮಾರ್ ಅಳಕೆಮಜಲು ಕಾರ್ಯಕ್ರಮ ನಿರೂಪಿಸಿದರು. ಮಾಣಿ ವಲಯದ ಒಕ್ಕೂಟದ ಅಧ್ಯಕ್ಷರುಗಳು, ಸದಸ್ಯರು ಶೌರ್ಯ ಸದಸ್ಯರು, ಸೇವಾ ಪ್ರತಿನಿಧಿ ಗಳು ಸಹಕರಿಸಿದರು.