





ಪುತ್ತೂರು: ವಿದ್ಯಾ ಭಾರತೀ ಅಖಿಲಾ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಸದಸ್ಯ ಸಂಸ್ಥೆ ಹಾಗೂ ಮಂಗಳೂರು ಪಬ್ಲಿಕ್ ಪದವಿಪೂರ್ವ ಕಾಲೇಜು ಹಾಸನ ಇದರ ಆಶ್ರಯದಲ್ಲಿ ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅಖಿಲಾ ಭಾರತೀಯ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸಮೃದ್ದಿ ಜೆ. ಶೆಟ್ಟಿ (ಪುತ್ತೂರು ನಗರ ಸಭಾ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಮತ್ತು ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿಯವರ ಮಗಳು) 100 ಮೀಟರ್ಸ್ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ನ.25 ರಿಂದ 30ರವರೆಗೆ ಹರಿಯಾಣದಲ್ಲಿ ನಡೆಯಲಿರುವ ಎಸ್.ಜಿ.ಎಫ್.ಐ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರಿಗೆ ಸಂಚಾಲಕರು, ಶಾಲಾ ಆಡಳಿತ ಮಂಡಳಿ, ಕಾಲೇಜು ಪ್ರಾಂಶುಪಾಲರು, ಶಿಕ್ಷಕ ರಕ್ಷಕ ಸಂಘ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳ ಸಹಕಾರದೊಂದಿಗೆ ಕಾಲೇಜಿನ ದೈಹಿಕ ಶಿಕ್ಷಕರಾದ ಡಾ ಜ್ಯೋತಿ ಯಾತೀಶ್ ರವಿಶಂಕರ್ ತರಬೇತಿ ನೀಡಿರುತ್ತಾರೆ.















