ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ, ಸಾಮೂಹಿಕ ಹುಟ್ಟುಹಬ್ಬ

0

ಕಾಣಿಯೂರು: ಪ್ರಗತಿ ವಿದ್ಯಾ ಸಂಸ್ಥೆ ಕಾಣಿಯೂರಿನಲ್ಲಿ ನ 14ರಂದು ಮಕ್ಕಳ ದಿನಾಚರಣೆ ಮತ್ತು ಮಕ್ಕಳ ಸಾಮೂಹಿಕ ಹುಟ್ಟು ಹಬ್ಬವನ್ನು ಸಡಗರ ,ಸಂಭ್ರಮದಿಂದ ಆಚರಿಸಲಾಯಿತು.


ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ನೆಹರೂರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ ಉತ್ತಮ ಮಾರ್ಗದರ್ಶನ ಮತ್ತು ಸಂಸ್ಕಾರಯುತ ಶಿಕ್ಷಣದೊಂದಿಗೆ ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮಕ್ಕಳಿಗೆ ಶುಭ ಹಾರೈಸಿದರು.
ಸುಳ್ಯ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಕೃಷ್ಣರಾಜ್ ಮುಖ್ಯ ಅತಿಥಿಯಾಗಿ ಆಗಮಿಸಿ ಪ್ರಗತಿ ವಿದ್ಯಾ ಸಂಸ್ಥೆಯ ಸರ್ವಾಂಗೀಣ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.


ಶಾಲಾ ನಾಯಕಿ 10ನೇ ತರಗತಿಯ ವಿದ್ಯಾರ್ಥಿನಿ ಪೃಥ್ವಿ ಎಂ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿ ನಾವು ಸಂಸ್ಥೆಯಲ್ಲಿ ಸಿಗುವ ಪಠ್ಯ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸುತ್ತಾ ಹೆತ್ತವರ ಮತ್ತು ಶಿಕ್ಷಕ ವೃಂದದವರ ಪ್ರೀತಿಗೆ ಪಾತ್ರರಾಗಬೇಕು ಎಂದರು. ಸಂಸ್ಥೆಯ ರಾಷ್ಟ್ರಮಟ್ಟದ ಪ್ರತಿಭೆ ಶ್ರೀಮಾ ಕೆ ಎಚ್, ರಾಜ್ಯಮಟ್ಟದ ಪ್ರತಿಭೆಗಳಾದ ಸಾನ್ವಿಕ ಎಚ್, ವಿಜ್ಞಾತ್ರಿ ಬಿ, ಮಿನಿ ಒಲಿಂಪಿಕ್ ಕ್ರೀಡಾ ಪ್ರತಿಭೆ ಶೋಭಿತ್ ವೇದಿಕೆಯಲ್ಲಿ ಆಸೀನರಾಗಿದ್ದರು.

ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ದಿವೀಶ್ ಮುರುಳ್ಯ ಹಾಗೂ ಆಂಗ್ಲಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಮಕ್ಕಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಗಾಯಕಿ ಪೂರ್ಣಿಮಾ ಕೃಷ್ಣರಾಜ್, ಸಹ ಆಡಳಿತಾಧಿಕಾರಿ ಹೇಮಾ ನಾಗೇಶ್ ರೈ ,ಹಿರಿಯ ಶಿಕ್ಷಕಿ ಸವಿತಾ ಕೆ, ಶಾಲಾ ಟ್ರಸ್ಟಿಗಳಾದ ವೃಂದ ಜೆ ರೈ ಮಾದೋಡಿ, ದೇವಿಕಿರಣ್ ರೈ ಮಾದೋಡಿ, ಹರಿಚರಣ್ ರೈ ಮಾದೋಡಿ ಉಪಸ್ಥಿತರಿದ್ದರು. ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು.ಶಿಕ್ಷಕಿ ಜಯಶೀಲ ಕೆ ಪ್ರಾರ್ಥಿಸಿದರು. ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ಧನ್ಯವಾದ ಸಮರ್ಪಿಸಿದರು.ಆಂಗ್ಲ ಮಾಧ್ಯಮದ ಮುಖ್ಯಸ್ಥೆ ಅನಿತಾ ಜೆ ರೈ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ ಅತಿಥಿಗಳಾಗಿ ಆಗಮಿಸಿರುವ ಕೃಷ್ಣರಾಜ್ ಮತ್ತು ಪೂರ್ಣಿಮಾ ಕೃಷ್ಣರಾಜ್ ದಂಪತಿಗಳು ಹಾಡು ,ಆಟಗಳ ಮೂಲಕ ಮಕ್ಕಳನ್ನು ಮನರಂಜಿಸಿದರು. ವಿದ್ಯಾರ್ಥಿಗಳಿಗೆ ಆರತಿ ಎತ್ತಿ ತಿಲಕವನ್ನು ಇಡುವ ಮೂಲಕ ಎಲ್ಲ ಶಿಕ್ಷಕ ವೃಂದದವರು ಸಾಮೂಹಿಕವಾಗಿ ಶುಭಹಾರೈಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕಿಯರಾದ ಕವಿತಾ ವಿ ರೈ, ಧನ್ಯ ಎಂ ಕೆ, ಜಯಶೀಲ ಕೆ ಕಾರ್ಯಕ್ರಮವನ್ನು ಸಂಘಟಿಸಿದರು.

LEAVE A REPLY

Please enter your comment!
Please enter your name here