ನೆಲ್ಯಾಡಿ: ಮಕ್ಕಳ ದಿನಾಚರಣೆ ಪ್ರಯುಕ್ತ ಗೋಳಿತ್ತೊಟ್ಟು ಅಂಗನವಾಡಿ ಕೇಂದ್ರದಲ್ಲಿ ನ.14ರಂದು ಬಾಲಮೇಳ ನಡೆಯಿತು.
ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಗೋಳಿತ್ತೊಟ್ಟು ಗ್ರಾ.ಪಂ.ಉಪಾಧ್ಯಕ್ಷ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಸದಸ್ಯ ಜನಾರ್ದನ ಪಟೇರಿ, ಗ್ರಾಮ ಆಡಳಿತಾಧಿಕಾರಿ ಶ್ವೇತ ಗೌಡ, ಬಾಲವಿಕಾಸ ಸಮಿತಿ ಅಧ್ಯಕ್ಷೆ ತಾಜುನ್ನೀಸಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಾಲವಿಕಾಸ ಸಮಿತಿ ಸದಸ್ಯರು, ಸ್ತ್ರೀಶಕ್ತಿ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆ, ಪೋಷಕರು, ಅಂಗನವಾಡಿ ಪುಟಾಣಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ರೀತಾಕ್ಷಿ ನಿರೂಪಿಸಿದರು. ಸಹಾಯಕಿ ಅಮಿತಾ ಸಹಕರಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
