ನರಿಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

0

ಪುತ್ತೂರು: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗ್ರಾಮ ಪಂಚಾಯತ್ ನರಿಮೊಗ್ರು ಹಾಗೂ ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ನರಿಮೊಗ್ರು ಇದರ ಜಂಟಿ ಆಶ್ರಯದಲ್ಲಿ ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ನರಿಮೊಗ್ರು ಇದರ ಉಪಾಧ್ಯಕ್ಷರಾದ ಉಮೇಶ್ ವಹಿಸಿದ್ದರು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಜ್ಯೋತಿ ರಾಜ್ ಇವರು ಮಹಿಳೆಯರು ತರಬೇತಿ ಪಡೆದು ಸ್ವ ಉದ್ಯೋಗ ಮಾಡುವಲ್ಲಿ ಗಮನ ಹರಿಸಿ, ಬ್ಯಾಂಕ್ ಸಾಲ ಸೌಲಭ್ಯ ಪಡೆದು ಯಶಸ್ವಿ ಮಹಿಳಾ ಉದ್ಯಮಿದಾರರಾಗಲು ಕರೆ ನೀಡಿದರು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಇವರು ಸ್ವ ಉದ್ಯೋಗದ ನಿಯಮಗಳ ಕುರಿತಾಗಿ ತಿಳಿಸಿ ಮಹಿಳೆಯರು ತಮ್ಮ ಮಾರುಕಟ್ಟೆ ಕೌಶಲ್ಯ ಹೆಚ್ಚಿಸಲು ಹೆಚ್ಚಿನ ಗಮನ ಹರಿಸಲು ತಿಳಿಸಿದರು.

ವೇದಿಕೆಯಲ್ಲಿ ಬ್ಯಾಂಕ್ ಆಫ್ ಬರೋಡ ಪುತ್ತೂರು ಶಾಖೆಯ ವ್ಯವಸ್ಥಾಪಕರಾದ ಭರತ್, ಗ್ರಾಮ ಪಂಚಾಯತ್ ನರಿಮೊಗ್ರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾ, ಶ್ರೀ ದುರ್ಗಾ ಸಂಜೀವಿನಿ ಒಕ್ಕೂಟ ನರಿಮೊಗ್ರು ಅಧ್ಯಕ್ಷೆ ಪೂರ್ಣಿಮಾ, ಎನ್ ಆರ್ ಎಲ್ ಎಂ ತಾಲೂಕು ಪಂಚಾಯತ್ ಪುತ್ತೂರು ಇದರ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್ ಕೆ, ಟೈಲರಿಂಗ್ ತರಬೇತುದಾರರಾದ ಪ್ರೀತಿ, ಕೃಷಿಯೇತರ ಚಟುವಟಿಕೆ ತಾಲೂಕು ಅಭಿಯಾನ ನಿರ್ವಹಣೆ ಘಟಕ ಪುತ್ತೂರು ತಾಲೂಕು ವ್ಯವಸ್ಥಾಪಕರಾದ ನಳಿನಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಚೈತ್ರ, ನಶ್ವಥ್ ಬೇಗಮ್ ಸ್ವಾಗತಿಸಿದರು. ವಿಸ್ಮಿತ ಧನ್ಯವಾದ ಮಾಡಿದರು. ಕಾರ್ಯಕ್ರಮದಲ್ಲಿ ಸಂಜೀವಿನಿ ಸದಸ್ಯರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here