ರಾಮಕುಂಜ: ಕರ್ನಾಟಕ ಸರ್ಕಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಸನ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಸನ ಜಿಲ್ಲೆ ಇವರ ಆಶ್ರಯದಲ್ಲಿ ಹಾಸನದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ 14ರ ವಯೋಮಿತಿಯ ಬಾಲಕರ ವಿಭಾಗದ ಎತ್ತರ ಜಿಗಿತದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ವಿವೇಕ್ ಎರ್ದಡ್ಕ ಬೆಳ್ಳಿ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಶಾಲಾ ಮುಖ್ಯಗುರು ಸತೀಶ್ ಭಟ್ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈ ತರಬೇತಿ ನೀಡಿದ್ದರು. ಈತ ಎರ್ದಡ್ಕ ಮಾಧವ ಹಾಗೂ ರೂಪ ಎಂ. ದಂಪತಿ ಪುತ್ರ.
