ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಎಡಪದವು ಇದರ ಜಂಟಿ ಆಶ್ರಯದಲ್ಲಿ ನ.17ರಂದು ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ’ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ 2025-26′ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಚಿನ್ನದ ಪದಕವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರಥಮ ವಿಜ್ಞಾನ ವಿಭಾಗದ ಅಕ್ಷರ ಎಂ. ಎಸ್ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಅಶ್ವತ್ ಕೆ.ಎಸ್ ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.