ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಹಾಯಧನ

0

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ನ.24ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಸಂಘದಲ್ಲಿ ಅಳವಡಿಸಿರುವ ನೂತನ ಲಿಫ್ಟ್ ಹಾಗೂ ಇತರ ಕಾಮಗಾರಿಗಳಿಗೆ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾದ ರೂ.5 ಲಕ್ಷ ಸಹಾಯಧನದ ಚೆಕ್ ಅನ್ನು ಸಂಘದ ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲುರವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಶಿಕುಮಾರ್ ರೈ ಅವರು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಹೊಸತನದೊಂದಿಗೆ ಸದಸ್ಯರಿಗೆ ಸೇವೆಯನ್ನು ನೀಡುತ್ತಿರುವುದು ಮತ್ತು ಹೆಚ್ಚಿನ ವ್ಯವಹಾರವಿದ್ದರೂ ಶೇ.100 ಸಾಲ ವಸೂಲಾತಿ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಘದ ವತಿಯಿಂದ ಶಶಿಕುಮಾರ್ ಬಾಲ್ಯೊಟ್ಟು ಅವರನ್ನು ಅಭಿನಂದಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಕೆ.ಯಂ., ವ್ಯವಸ್ಥಾಪಕ ಮಹೇಶ್ ಎಂ.ಟಿ., ಸಿಬ್ಬಂದಿಗಳಾದ ಸಂದೀಪ್ ಶೆಟ್ಟಿ, ಧನುಷ್, ಪ್ರಜ್ಞ ಮಾರ್ಲ, ವನಿತ ಶೆಟ್ಟಿ, ಪ್ರಮೋದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here