





ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.4 ಮತ್ತು 5ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯು ನ.26ರಂದು ದೇವಸ್ಥಾನದಲ್ಲಿ ಬಿಡುಗಡೆಗೊಂಡಿತ್ತು.


ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ನಾಗತಂಬಿಲ, ಕಾರ್ತಿಕಪೂಜೆ, ಪವಮಾನ ಕಲಶಾಭಿಷೇಕ ಕಾರ್ಯಕ್ರಮದಲ್ಲಿ ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯು ಬಿಡುಗಡೆಗೊಂಡಿತ್ತು. ಪವಮಾನ ಕಲಶಾಭಿಷೇಕ ಹಾಗೂ ಅನ್ನಸಂತರ್ಪಣೆಯು ವಿಶ್ವನಾಥ್ ಪೂಜಾರಿ ಮತ್ತು ಮಕ್ಕಳು ವಿಶ್ವರಂಜಿನಿ ಮಾಪಲ ಇವರ ಸೇವಾರ್ಥವಾಗಿ ನಡೆಯಿತು.
ಕ್ಷೇತ್ರದ ಅರ್ಚಕರು, ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷರು, ಅಧ್ಯಕ್ಷರು, ಸದಸ್ಯರು, ಪ್ರಧಾನ ಸಂಚಾಲಕರುಗಳು, ಗೌರವಸಲಹೆಗಾರರು, ವಿವಿಧ ಸಮಿತಿಯ ಸಂಚಾಲಕರುಗಳು, ಉಪಾಧ್ಯಕ್ಷರುಗಳು ಹಾಗೂ ಸದಸ್ಯರು, ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.













