ಪುತ್ತೂರು: ಪ್ರತಿಷ್ಥಿತ ಅಂತರ್ ರಾಜ್ಯ ಸಹಕಾರ ಸಂಸ್ಥೆಯಾಗಿರುವ ಕ್ಯಾಂಪ್ಕೋದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎಸ್.ಆರ್. ಸತೀಶ್ಚಂದ್ರ ಅವರು ಅಧಿಕಾರ ಸ್ವೀಕಸಿದ ಬಳಿಕ ಡಿ.3ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

ದೇವಳದಲ್ಲಿ ಅವರು ತುಪ್ಪದ ದೀಪ ಬೆಳಗಿಸಿ, ಮಹಾಲಿಂಗೇಶ್ವರ ದೇವರಿಗೆ ಅಭಿಷೇಕಕ್ಕಾಗಿ ಎಳ್ಳೆಣ್ಣೆ ಸಮರ್ಪಣೆ ಮಾಡಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ದೇವಳದ ಗೌರವಾರ್ಥವಾಗಿ ಶಲ್ಯ ತೊಡಿಸಿ ಗೌರವಿಸಿ ಮುಂದೆ ನಡೆಯುವ ದೇವಳದ ಜೀರ್ಣೋದ್ಧಾರ ಕಾರ್ಯಗಳಿಗೆ ಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು. ದೇವಳದ ಪ್ರಧಾನ ಅರ್ಚಕ ವೇ.ಮೂ.ವಿ.ಎಸ್ ಭಟ್ ಪ್ರಾರ್ಥನೆ ಮಾಡಿ ಪ್ರಸಾದ ವಿತರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ, ಕ್ಯಾಂಪ್ಕೋ ನಿರ್ದೇಶಕ ಗಣೇಶ್ ಕುಮಾರ್, ಮಾಜಿ ನಿರ್ದೇಶಕ ರಾಘವೇಂದ್ರ ಭಟ್, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಹೆಚ್, ನಿರ್ದೇಶಕಿ ಜಯಶ್ರೀ ಎಸ್ ಶೆಟ್ಟಿ, ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಮುಖರಾದ ಮೋಹನ್ ಪಕ್ಕಳ, ಪವಿತ್ರ ಮತ್ತಿತರರು ಉಪಸ್ಥಿತರಿದ್ದರು.