ರಾಷ್ಟ್ರೀಯ ಥ್ರೋ ಬಾಲ್ ಚಾಂಪಿಯನ್ ಶಿಪ್ ಗೆ ವಿವೇಕಾನಂದ ಕಾಲೇಜಿನ ಕೀರ್ತಿಲತಾ ಆಯ್ಕೆ

0

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಪುತ್ತೂರು, ಇಲ್ಲಿನ ದ್ವಿತೀಯ ಬಿ.ಎ ವಿದ್ಯಾರ್ಥಿನಿ ಕು. ಕೀರ್ತಿಲತಾ ಇವರು ಕರ್ನಾಟಕ ಜೂನಿಯರ್ ತ್ರೋಬಾಲ್ ತಂಡಕ್ಕೆ ಆಯ್ಕೆಯಾಗಿರುತ್ತಾರೆ. ಇದೇ ಬರುವ ಡಿಸೆಂಬರ್ 5 ರಿಂದ 7ರವರೆಗೆ, ಮಹಾರಾಷ್ಟ್ರದ ಬದ್ಲಾಪುರದಲ್ಲಿ ನಡೆಯಲಿರುವ 35ನೇ ರಾಷ್ಟ್ರೀಯ ಮಟ್ಟದ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ.

ಇವರು ಮಡಿಕೇರಿ ತಾಲೂಕಿನ ಬಂಗಾರ ಕೋಡಿಯ ದಿ. ಲಕ್ಷ್ಮಣ ಬಿ ಆರ್ ಮತ್ತು ವಿಧಾ ಕುಮಾರಿಯವರ ಮಗಳು. ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪ್ರಾಧ್ಯಾಪಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರವಿಶಂಕರ್ ವಿ.ಎಸ್ ಹಾಗೂ ಯತೀಶ್ ಕುಮಾರ್ ಬಾರ್ತಿಕುಮೇರ್ ತರಬೇತಿಯನ್ನು ನೀಡಿದ್ದಾರೆ.

LEAVE A REPLY

Please enter your comment!
Please enter your name here