ಕಾನೂನು ಸೇವೆಗಳ ಸಮಿತಿಯಿಂದ ವಿಶೇಷ ಚೇತನರ ದಿನಾಚರಣೆ

0

ಪುತ್ತೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಶಿವಸದನ ಚಾರಿಟೇಬಲ್ ಟ್ರಸ್ಟ್, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ದ.ಕ, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಿಶೇಷ ಚೇತನ ದಿನಾಚರಣೆ ಅಂಗವಾಗಿ ಮಾಹಿತಿ ಕಾರ್ಯಕ್ರಮವು ಮುರ ಶಿವಸದನ ಮಕ್ಕಳ ವಸತಿ ಶಾಲೆಯಲ್ಲಿ ನಡೆಯಿತು.


ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ಯೋಗೇಂದ್ರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿಗೆ ಹಣ್ಣು ಹಂಪಲು ವಿತರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಯದುರಾಜ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಶಿವಸದನ ಚಾರಿಟೇಬಲ್ ಟ್ರಸ್ಟ್‌ನ ಗೌರವಾಧ್ಯಕ್ಷ ರಘುನಾಥ್ ರಾವ್ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಜಿ ಜಗನ್ನಾಥ ರೈ, ಖಜಾಂಜಿ ಮಹೇಶ್ ಸವಣೂರು ಸಂದರ್ಭೋಚಿತವಾಗಿ ಮಾತನಾಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಮೊಹಮ್ಮದ್ ರಫೀಕ್ ದರ್ಬೆ, ಪ್ಯಾನೆಲ್ ವಕೀಲೆ ರಾಜೇಶ್ವರಿ, ಚಂದ್ರಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಿವ ಸದನ ಟ್ರಸ್ಟ್‌ನ ಸುವನ್‌ಕೃಷ್ಣ ಸ್ವಾಗತಿಸಿ, ಕೋಶಾಧಿಕಾರಿ ದಿನಕರ ರಾವ್ ವಂದಿಸಿದರು. ಕಾರ್ಯದರ್ಶಿ ಕರುಣ್ ರಾವ್ ಬೆಳ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ಯಾನೆಲ್ ವಾಲೆಂಟಿಯರ್ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಕಾರ್ಯದರ್ಶಿ ನಯನ ರೈ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಸಿಬಂದಿ ಜೋತಿ ಹಾಗೂ ಗಗನ್ ರಾಜ್ ಸಹಕರಿಸಿದರು.

LEAVE A REPLY

Please enter your comment!
Please enter your name here