ಡಿ.14,15ರಂದು ಬುಡೇರಿಯಾ ಶಿರಾಡಿ ದೈವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ, ವಾರ್ಷಿಕ ನೇಮೋತ್ಸವ

0

ಆಲಂಕಾರು: ಆಲಂಕಾರು ಗ್ರಾಮದ ಬುಡೇರಿಯಾ ಕೆದಿಲ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಡಿ. 14,15ರಂದು ಧಾರ್ಮಿಕ ಕಾರ್ಯಕ್ರಮ, ಪಜ್ಜಡ್ಕ ಕಲ್ಕುಡ ಕಟ್ಟೆಯ ಸಮೀಪ ಕಾಲಾವಧಿಯ ಬುಡೇರಿಯಾ ಶ್ರೀ ಶಿರಾಡಿ ದೈವದ ನೇಮೋತ್ಸವ ನಡೆಯಲಿದೆ.

ಡಿ.10 ರಂದು ತೋಟಂತಿಲ ಶ್ರೀ ಅನಂತರಾಮ ಭಟ್ ಇವರಿಂದ ಪಜ್ಜಡ್ಕದಲ್ಲಿ ನಾಗತಂಬಿಲ ಶ್ರೀ ರಕ್ತೇಶ್ವರಿ ದೈವಕ್ಕೆ ತಂಬಿಲ ನಡೆದು ,ಕೆದಿಲ ಶ್ರೀ ಶಿರಾಡಿ ದೇವಸ್ಥಾನದಲ್ಲಿ ಗೊನೆ ಮಹೂರ್ತ ನಡೆಯಿತು.


ಡಿ.14 ರಂದು ಬ್ರಹ್ಮಶ್ರೀ ವೇ.ಮೂ ತಂತ್ರಿ ಕೆಮ್ಮಿಂಜೆ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಇವರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ ಶಿರಾಡಿ ದೇವಸ್ಥಾನದಲ್ಲಿ ಗಣಹೋಮ, ದೈವಗಳಿಗೆ ಕಲಶಾಭಿಷೇಕ, ಆಶ್ಲೇಷ ಬಲಿ, ತಂಬಿಲ ಬಳಿಕ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಕೆದಿಲದಲ್ಲಿ ಶ್ರೀ ಶಿರಾಡಿ ದೈವದ ಭಂಡಾರ ತೆಗೆದು ಅದೇ ಸಮಯಕ್ಕೆ ನೇಮೋತ್ಸವದ ಸ್ಥಳದಲ್ಲಿ ಕಲ್ಕುಡ, ಕಲ್ಲುರ್ಟಿ, ದೈವಗಳ ಭಂಡಾರ ತೆಗೆದು ರಾತ್ರಿ ಭಜನಾ ಕಾರ್ಯಕ್ರಮ ನಡೆದು ಅನ್ನಪ್ರಸಾದ ನಡೆದು ಕಲ್ಕುಡ, ಕಲ್ಲುರ್ಟಿ, ಚಾಮುಂಡಿ ಹಾಗೂ ಆಲಿ ದೈವಗಳ ನೇಮೊತ್ಸವ ನಡೆಯಲಿದೆ.

ಡಿ.15 ರಂದು ಬೆಳಿಗ್ಗೆ ಶ್ರೀ ಶಿರಾಡಿ ದೈವದ ನೇಮೊತ್ಸವ,ಹರಿಕೆ ಒಪ್ಪಿಸುವುದು,ಅನ್ನಪ್ರಸಾದ ಬಲಿಯೊಂದಿಗೆ ಗಡಿ ಜಾಗಕ್ಕೆ ಪ್ರಯಾಣ ದೈವ ಸಂಕಲ್ಪದಂತೆ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಎಲ್ಲಾರು ಅಗಮಿಸಿ ಶ್ರೀಮುಡಿ ಗಂಧ ಪ್ರಸಾದ ಸ್ವೀಕರಿಸುವಂತೆ ಊರ ಹತ್ತು ಸಮಸ್ತರ ಪರವಾಗಿ ಆಡಳಿತ ಪ್ರಮುಖರಾದ ಈಶ್ವರ ಗೌಡ ಪಜ್ಜಡ್ಕ, ಸಂಕಪ್ಪ ಗೌಡ ಗೌಡತ್ತಿಗೆ, ಸೂರಪ್ಪ ಪೂಜಾರಿ ಹೊಸ ಮಜಲು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here