





ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಅವರು ಡಿ.14ರಂದು ಇತಿಹಾಸ ಪ್ರಸಿದ್ದ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಹರ್ಷೇಂದ್ರ ಕುಮಾರ್ ಅವರಿಗೆ ಶಲ್ಯ ತೊಡಿಸಿ ಗೌರವಿಸಿದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಸಾದ ನೀಡಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ ಉಪಸ್ಥಿತರಿದ್ದರು.



ದೇವಳದ ಅಭಿವೃದ್ಧಿಗೆ ಸಲಹೆ:
ದೇವಳಕ್ಕೆ ಭೇಟಿ ನೀಡಿದ ಶ್ರೀ ದೇವರ ದರ್ಶನ ಪಡೆದ ಹರ್ಷೇಂದ್ರ ಅವರು ಬಳಿಕ ದೇವಳದ ಆಡಳಿತ ಕಚೇರಿಯಲ್ಲಿ ದೇವಳದ ಅಭಿವೃದ್ಧಿ ಕುರಿತು ಈಶ್ವರ ಭಟ್ ಪಂಜಿಗುಡ್ಡೆಯವರಿಗೆ ಸಲಹೆ ನೀಡಿದರು.










