ಸವಣೂರು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ,ಕೊಡಗು ಜಿಲ್ಲಾ ಹಿರಿಯರ ಕ್ರೀಡಾಕೂಟದಲ್ಲಿ ಸವಣೂರಿನ ಪುಷ್ಪಾವತಿ ಕೇಕುಡೆ ಹಲವು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

200 ಮೀ. ಓಟ ,400 ಮೀ. ಓಟ ,ಚಕ್ರ ಎಸೆತದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಪುಷ್ಪಾವತಿ ಕೇಕುಡೆ ಅವರು ಪ್ರಸ್ತುತ ಪುತ್ತೂರು ತಾಲೂಕು ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾಗಿದ್ದು, ಸವಣೂರು ಉ.ಹಿ.ಪ್ರಾ.ಶಾಲಾಭಿವೃದ್ದಿ ಸಮಿತಿ ಹಾಗೂ ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪೋಷಕರ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದಾರೆ