




ಧನುಷ್ ಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆ



ಕಾಣಿಯೂರು : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿಯಲ್ಲಿ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯು ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತದೆ.





ಧನುಷ್ ಕೆ (7ನೇ)ಸಂಸ್ಕೃತ ಧಾರ್ಮಿಕ ಪಠಣ ಮತ್ತು ದೇಶಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವನ್ಷಿ ಕೆ ಎಂ (7ನೇ) ಪ್ರಬಂಧ ದ್ವಿತೀಯ , ಸಹರ್ಷ್ ವಿ ರೈ (6ನೇ) ಕ್ಲೇ ಮಾಡಲಿಂಗ್ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ವಿಜೇತರನ್ನು ಶಾಲಾ ಸಂಚಾಲಕರು, ಆಡಳಿತ ಅಧಿಕಾರಿಗಳು, ಮುಖ್ಯ ಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು. ಶಿಕ್ಷಕಿಯರಾದ ಅನಿತಾ ಎಸ್ ರೈ ಮತ್ತು ಚಿತ್ರಕಲಾ ಸಹಕರಿಸಿದರು.










