ಬನ್ನೂರು ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

0

ಪುತ್ತೂರು: ಬನ್ನೂರು ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಡಿ.16ರಂದು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ಮಾಸಿಕ ಯಕ್ಷಗಾನ ತಾಳಮದ್ದಲೆ ಪಾರ್ತಿಸುಬ್ಬ ವಿರಚಿತ ‘ವಾಲಿಮೋಕ್ಷ’ ಪ್ರಸಂಗ ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ನಿತೀಶ ಕುಮಾರ್ ಎಂಕಣ್ಣಮೂಲೆ ಹಾಗೂ ಚೆಂಡೆ ಮದ್ದಲೆಗಳಲ್ಲಿ ಪಿ.ಟಿ. ಜಯರಾಮ ಭಟ್, ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ ಪಾಂಗಣ್ಣಾಯ ಕೋಡಿಬೈಲು, ಅನೀಶ್ ಕೃಷ್ಣ ಪುಣಚ ಭಾಗವಹಿಸಿದರು. ಶ್ರೀರಾಮನಾಗಿ ಭಾಸ್ಕರ ಶೆಟ್ಟಿ ಸಾಲ್ಮರ ಮತ್ತು ಭಾಸ್ಕರ ಬಾರ್ಯ, ವಾಲಿಯಾಗಿ ಗುಡ್ಡಪ್ಪ ಬಲ್ಯ, ಸುಗ್ರೀವನಾಗಿ ಮಾಂಬಾಡಿ ವೇಣುಗೋಪಾಲ ಭಟ್, ಮತ್ತು ತಾರೆಯ ಪಾತ್ರದಲ್ಲಿ ಲಕ್ಷ್ಮೀ ಕಾಂತ ಹೆಗ್ಡೆ ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಬಡೆಕ್ಕಿಲ ಚಂದ್ರಶೇಖರ ಭಟ್ ಪ್ರಾಯೋಜಿಸಿದರು. ಭಾಸ್ಕರ ಬಾರ್ಯ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here